Tuesday, April 3, 2012

ಕರಿಬೇವಿನಿಂದ ದೇಹದ ತೂಕ ಕಡಿಮೆಯಾಗುವುದೆ?


ಕರಿಬೇವಿನಿಂದ ದೇಹದ ತೂಕ ಕಡಿಮೆಯಾಗುವುದೆ?
ಕರಿಬೇವಿನ ಎಲೆಯನ್ನು ಅಡುಗೆಯಲ್ಲಿ ಬಳಸಿದರೆ ಅಡುಗೆ ಘಮ್ಮೆನ್ನುವುದು. ಕೂದಲಿನ ಆರೈಕೆಯಲ್ಲಿ ಕೂಡ ಕರಿಬೇವಿನ ಎಲೆಯನ್ನು ಬಳಸಲಾಗುವದು. ರುಚಿ, ಸೌಂದರ್ಯ, ಆರೋಗ್ಯಕ್ಕೆ ಹೀಗೆ ಅನೇಕ ಗುಣಗಳನ್ನು ಈ ಕರಿಬೇವು ಹೊಂದಿದೆ. ಬನ್ನಿ ಕರಿಬೇವಿನ ನಾನಾ ರೀತಿಯ ಉಪಕಾರಗಳ ಬಗ್ಗೆ ತಿಳಿಯೋಣ:

1.
ಹೊಟ್ಟೆ ಸಮಸ್ಯೆ ಮತ್ತು ಅಜೀರ್ಣ ನಿವಾರಿಸಲು ಕರಿಬೇವು ಒಳ್ಳೆಯದು. ಕರಿಬೇವಿನ ಎಲೆಯಿಂದ ರಸ ಹಿಂಡಿ ಸ್ವಲ್ಪ ನಿಂಬೆ ರಸ ಮತ್ತು ಸಕ್ಕರೆ ಸೇರಿಸಿ ತಿಂದರೆ ಹೊಟ್ಟೆ ಮತ್ತು ಅಜೀರ್ಣ ಸಮಸ್ಯೆ ನಿವಾರಣೆಯಾಗುವುದು.
2. ದಿನವೂ ಕರಿಬೇವಿನ ಎಲೆ ತಿಂದರೆ ದೇಹದ ತೂಕ ಕಡಿಮೆಯಾಗುವುದು.
3. ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
4. ತಲೆಗೆ ಹಚ್ಚುವ ಎಣ್ಣೆಗೆ ಸ್ವಲ್ಪ ಕರಿಬೇವಿನ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ತಲೆಗೆ ಹಚ್ಚುವುದು ಒಳ್ಳೆಯದು.

ಕ್ಯಾನ್ಸರ್‌ಗೆ ರಾಮಬಾಣ ದ್ರಾಕ್ಷಿ ಹಣ್ಣಿನ ಬೀಜ


ಕ್ಯಾನ್ಸರ್‌ಗೆ ರಾಮಬಾಣ ದ್ರಾಕ್ಷಿ ಹಣ್ಣಿನ ಬೀಜ

ದ್ರಾಕ್ಷಿ ಹಣ್ಣಿನ ಬೀಜದ ಸತ್ವವು ತಲೆ ಮತ್ತು ಕ
ತ್ತಿಗೆ ಎಲುಬಿನ ಕೋಶ ಕಾರ್ಸಿನೋಮಾ ಕೋಶಗಳನ್ನು ಆರೋಗ್ಯವಂತ ಕೋಶಗಳಿಗೆ ಹಾನಿಯಾಗದಂತೆ ಅವುಗಳನ್ನು ಕೊಲ್ಲುತ್ತದೆಂದು ಭಾರತೀಯ ಮೂಲದ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಇವರು ತಮ್ಮ ಪ್ರಯೋಗವನ್ನು ಇಲಿಯ ಮಾದರಿಗಳಲ್ಲಿ ಪ್ರಯೋಗಿಸಿ ಸಂಶೋಧನೆ ನಡೆಸಿದ್ದಾರೆ.

ಅಮೇರಿಕಾದಲ್ಲಿ ಹತ್ತಿರ ಹತ್ತಿರ 12,000
ದಷ್ಟು ಜನರು ತಲೆ ಹಾಗೂ ಕುತ್ತಿಗೆ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಿದ್ದು ಈ ವರ್ಷ ಸಾವಿನ ಸಂಖ್ಯೆಯು ಅರ್ಧ ಮಿಲಿಯನ್ ಅನ್ನು ದಾಟಿದೆ.

ಈ ರೋಗವು ದೇಹದ ಆರೋಗ್ಯವಂತ ಕೋಶಗಳ ಹೆಚ್ಚಿನ ಭಾಗವನ್ನು
ಆಕ್ರಮಿಸಿದ್ದು, ಅವುಗಳನ್ನು ಹಾನಿಗೊಳಪಡಿಸುವ ಶಕ್ತಿಯನ್ನು ಇವುಗಳು ಪಡೆದುಕೊಂಡಿದೆ. "ಇದೊಂದು ನಾಟಕೀಯ ಪರಿಣಾಮವಾಗಿದೆ ಎಂದು ಕೊಲೆರಾಡೊ ಕ್ಯಾನ್ಸರ್ ಸಂಸ್ಥೆಯ ಸಂಶೋಧಕ ರಾಜೇಶ್ ಅಗರ್‌ವಾಲ್ ತಿಳಿಸಿದ್ದಾರೆ.

ಕ್ಯಾನ್ಸರ್ ಕೋಶಗಳು ಹೆಚ್ಚು ವೇಗವಾಗಿ
ಬೆಳೆಯುವ ಕೋಶಗಳಾಗಿವೆ. ಅದೂ ಅಲ್ಲದೆ, ಸಾಮಾನ್ಯವಾಗಿ ಶೀಘ್ರ ಬೆಳವಣಿಗೆಯ ಕೋಶಗಳಾಗಿದ್ದು, ಅವುಗಳು ಬೆಳೆಯಲಾರದ ಸ್ಥಿತಿಗೆ ಬಂದಾಗ ಅವುಗಳು ಸಾಯುತ್ತವೆ ಎಂದವರು ತಿಳಿಸಿದ್ದಾರೆ.

ದ್ರಾಕ್ಷಿ ಬೀಜದ ಸತ್ವವು ಅವು ಬೆಳೆಯಲಾಗದೆ ಇರುವಂತಹ ಸ್ಥಿತಿಯನ್ನು ಉಂಟುಮಾಡುವುದರಿಂದ ಅವುಗಳು ಬೆಳೆಯಲಾರವು.


ನಿರ್ದಿಷ್ಟವಾಗಿ,
ದ್ರಾಕ್ಷಿ ಬೀಜದ ಸತ್ವವು ಕ್ಯಾನ್ಸರ್ ಕೋಶಗಳಾದ ಡಿಎನ್‌ಎಗೆ ಹಾನಿ ಉಂಟು ಮಾಡುತ್ತವೆ ಮತ್ತು ಅದು ಪುನಃ ಸರಿಯಾಗುವಂತಹ ದಾರಿಯನ್ನು ನಿಲ್ಲಿಸುತ್ತದೆ.

ಇದರ ಬಗೆಗಿನ ಪ್ರಯೋಗವನ್ನು ಮೊದಲು ಇಲಿಗಳ ಮೇಲೆ ಮಾಡಲಾಗಿತ್ತು ಅವುಗಳ ಮೇಲೂ ಇದು ಉತ್ತಮ ಪರಿಣಾಮವನ್ನು ಬೀರಿತ್ತು.


ದ್ರಾಕ್ಷಿ ಬೀಜದ ಸಾರವು ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತಾದರೂ ಆರೋಗ್ಯವಂತ ಕೋಶಗಳಿಗೆ ಇದು ಯಾವುದೇ ರೀತಿಯ ಹಾನಿಯನ್ನುಂಟುಮಾಡುವುದಿಲ್ಲ.


ಕ್ಯಾನ್ಸರ್ ಕೋಶಗಳ ದಾರಿಯನ್ನು ನಾವು ಮುಚ್ಚುವುದರಿಂದ ಅವುಗಳ ಬೆಳವಣಿಗೆ
ಕುಂಠಿತಗೊಳ್ಳುತ್ತವೆ ಆದರೆ ಆರೋಗ್ಯವಂತ ಕೋಶಗಳ ಬಗ್ಗೆ ಈ ರೀತಿಯ ನಂಬಿಕೆ ಸತ್ಯವಾಗಿರುವುದಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.
ದ್ರಾಕ್ಷಿ ಹಣ್ಣಿನ ಬೀಜ ಕ್ಯಾನ್ಸರ್ ಕೊಲೆರಾಡೊ ಕ್ಯಾನ್ಸರ್ ಸಂಸ್ಥೆ
.

ಕೆಂಪು ತರಕಾರಿಯ 4 ಆರೋಗ್ಯಕರ ಗುಣಗಳು


ಕೆಂಪು ತರಕಾರಿಯ 4 ಆರೋಗ್ಯಕರ ಗುಣಗಳು

ಪೋಷಕಾಂಶ ಇರುವ ಆಹಾರಗಳನ್ನು ಡಯಟ್ ನಲ್ಲಿ ಪಾಲಿಸಬೇಕೆಂದು ಹೇಳುವಾಗ ತಕ್ಷಣ ನೆನೆಪಾಗುವುದು ಹಸಿ ಸೊಪ್ಪು, ತರಕಾರಿಗಳು. ಆದರೆ ಇವುಗಳಷ್ಟೆ ಕೆಂಪು ಬಣ್ಣದ ತರಕಾರಿಗಳು ತೂಕ ಇಳಿಸುವಲ್ಲಿ ಮತ್ತು ಆರೋಗ್ಯವನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿದೆ. ಕೆಂಪು ತರಕಾರಿಯ ಗುಣಗಳ ಬಗ್ಗೆ ತಿಳಿಯೋಣ ಬನ್ನಿ.

1. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ: ಕೆಂಪು ಬಣ್ಣದ ತರಕಾರಿಗಳಲ್ಲಿರುವ ಲೈಕೊಪೆನೆ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಕೆಂಪು ತರಕಾರಿಗಳು ಗರ್ಭಕೋಶದ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ.
ಈ ಲೈಕೊಪೆನೆ ಅಂಶ ಟೊಮೆಟೊದಲ್ಲಿ ಅಧಿಕವಾಗಿ ಕಂಡುಬರುತ್ತದೆ.

2. ರಕ್ತ ಹೀನತೆ ತಡೆಗಟ್ಟುವುದು: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಕಾಯಿಲೆ ರಕ್ತಹೀನತೆ. ಬೀಟ್ ರೂಟ್ಸ್ ನಲ್ಲಿರುವ ಕ್ಯಾರೋಟಿನ್ಸ್ ಮತ್ತು ಅಧಿಕ ಮ್ಯಾಗ್ನೆಸೆ ಅಂಶ ದೇಹದಲ್ಲಿ ರಕ್ತ ಕಣಗಳು ಹೆಚ್ಚಾಗಲು ಸಹಕಾರಿಯಾಗಿದೆ.

3. ವಿಟಮಿನ್ ಗಳು: ಈ ಕೆಂಪು ತರಕಾರಿಗಳಲ್ಲಿ ಅಧಿಕ ವಿಟಮಿನ್ ಸಿ ಮತ್ತು ವಿಟಮಿನ್ ಎ ಇದೆ. ಇದರಲ್ಲಿರುವ ಬೇಟಾ ಕ್ಯಾರೊಟಿನ್ ಶ್ವಾಸಕೋಶದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿಯಾಗಿದೆ.

4. ಕ್ಯಾಲೋರಿ ಕಡಿಮೆ ಮಾಡುತ್ತೆ: ಈ ತರಕಾರಿಗಳಲ್ಲಿ ಕ್ಯಾಲೋರಿ ಕಡಿಮೆ ಇದ್ದು ಇವುಗಳನ್ನು ತಿನ್ನುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಬಹುದು.

ಆಹಾರಕ್ಕೆ ಪರ್ಯಾಯ ಪದವೇ ಕೆಂಪಕ್ಕಿ ಅನ್ನ

ಆಹಾರಕ್ಕೆ ಪರ್ಯಾಯ ಪದವೇ ಕೆಂಪಕ್ಕಿ ಅನ್ನ

ಭತ್ತದಿಂದ ಅಕ್ಕಿ, ಅಕ್ಕಿಯಿಂದ ಅನ್ನ, ಆಹಾರಕ್ಕೆ ಪರ್ಯಾಯ ಪದವೇ ಅನ್ನ. ದಕ್ಷಿಣ ಭಾರತದಲ್ಲಿ ನಾವು ಹೆಚ್ಚು ಉಪಯೋಗಿಸುವ ಆಹಾರವೇ ಅನ್ನ. ಹಿಂದೆ ಒಬ್ಬನ ಶಕ್ತಿಯನ್ನು ಅಳೆಯುತ್ತಿದ್ದುದೇ ಅವನು ತಿನ್ನುವ ಅನ್ನದ ಅಳತೆಯಿಂದ. "ಪಾವಕ್ಕಿ ತಿಂದು ಅರಗಿಸಿಕೊಳ್ಳುತ್ತಾನೆ, ಸೇರಕ್ಕಿ ತಿಂದು ಅರಗಿಸಿಕೊಳ್ಳುತ್ತಾನೆ." ಎಂಬ ನಾಣ್ಣುಡಿಯಿದೆ.

ನಾವು ಮಾಡುತ್ತಿದ್ದ ಹಾಗೂ ಮಾಡುತ್ತಿರುವ ತಪ್ಪು ಇದೇ. ಅವಶ್ಯಕತೆಗಿಂತ ಹೆಚ್ಚು ಅನ್ನವನ್ನು ತಿನ್ನಬಾರದು. ಬಹುಶಃ ಭತ್ತವನ್ನು ಬೆಳೆಯುವ ಕಲೆಯನ್ನು ಕಲಿತ ಮೇಲೆ ದಿನನಿತ್ಯದ ಆಹಾರ ಹುಡುಕಬೇಕಾದ ಕಷ್ಟ ತಪ್ಪಿ ಮನುಷ್ಯ ನಿರಾಳನಾದನೆಂದು ಕಾಣುತ್ತದೆ. ಅದರಿಂದ, ಅನ್ನ ಅವನ ಎಲ್ಲಾ ಆಹಾರಪದಾರ್ಥಗಳಲ್ಲಿ ಮೊದಲ ಸ್ಥಾನ ಪಡೆಯಿತು.

ಈಗ ಉಪಯೋಗಿಸುತ್ತಿರುವ ಬಿಳಿಯ ಅಕ್ಕಿ ಯಾವ ಅಳತೆಗೋಲಿನಿಂದಲೂ ಸರಿಯಾದ ಆಹಾರ ಪದಾರ್ಥವಲ್ಲ. ತೌಡಿನಲ್ಲಿ ಎಲ್ಲಾ ಸತ್ವಗಳು ಹೊರಟುಹೋಗಿರುತ್ತವೆ. ನಾವು ಅಕ್ಕಿ ಎಂದು ಹೇಳಿದರೆ ಅದು ಕೆಂಪಕ್ಕಿಯೇ. ಹಿಂದೆ ಇದರಲ್ಲಿ ಅನೇಕ ತಳಿಗಳಿದ್ದವು.

ಈಗ 'ದೇವಮಲ್ಲಿಗೆ' ಎಂಬ ಒಂದೇ ರೀತಿಯ ತಳಿ ಉಳಿದಿದೆ. ಅದನ್ನೂ ಸಹ ಹೆಚ್ಚು ಪಾಲೀಶ್ ಮಾಡಿರುತ್ತಾರೆ. ಹಾಗೆ ಮಾಡದಂತೆ ವಿನಂತಿಸಿಕೊಳ್ಳಬೇಕು. ಅಕ್ಕಿಯನ್ನು ತಿಕ್ಕಿ ತಿಕ್ಕಿ ಅನೇಕ ಸಲ ತೊಳೆಯಬಾರದು. ಧೂಳು ಹೋಗುವಂತೆ ಒಮ್ಮೆ ತೊಳೆದರೆ ಸಾಕು. ಇಲ್ಲದಿದ್ದರೆ ಜೀವಸತ್ವಗಳು ನಷ್ಟವಾಗುತ್ತವೆ.

ಗಂಜಿಯನ್ನು ಬಸಿದು ಗಟಾರಕ್ಕೆ ಚೆಲ್ಲಬಾರದು. ಗಂಜಿಯನ್ನು ಇಂಗಿಸಿ ಅನ್ನ ಮಾಡಬೇಕು. ಇಲ್ಲದಿದ್ದರೆ ರೈಸ್ ಕುಕ್ಕರ್‍ನಲ್ಲಿ ಅನ್ನ ಮಾಡಬೇಕು.

ಅಕ್ಕಿಯಲ್ಲಿನ ಆಹಾರ ಸತ್ವಗಳು : ಪ್ರತಿ 100 ಗ್ರಾಂ ನಲ್ಲಿ : ನೀರು 13.3%, ಸಸಾರಜನಕ 7.5%, ಖನಿಜಗಳು 0.9%, ಕ್ಯಾಲ್ಸಿಯಂ 10 ಮಿ.ಗ್ರಾಂ, ನಾರು 0.6%, ಪಿಷ್ಟ 76.7%, ಕ್ಯಾಲೋರಿ 346, ರಂಜಕ 90 ಮಿ.ಗ್ರಾಂ, ಕಬ್ಬಿಣ 3.2 ಮಿ.ಗ್ರಾಂ, ವಿಟಮಿನ್ 'ಬಿ'

ಅಕ್ಕಿ ಬೆಳೆದ ಕಥೆ : ಕ್ರಿಸ್ತಪೂರ್ವ 3000 ದಿಂದ ಉಪಯೋಗಿಸುತ್ತಿರುವ ದಾಖಲೆಗಳಿವೆ. ಅಕ್ಕಿ, ರಾಗಿ, ಗೋಧಿ ಮೂರೂ ಪಿಷ್ಟ ಪದಾರ್ಥಗಳೇ ಆದರೂ ಅಕ್ಕಿಯಲ್ಲಿನ ಪಿಷ್ಟದಲ್ಲಿ ಅಮೈಲೋಪೆಕ್ಟಿನ್ ಎಂಬ ಅಂಶ ಹೆಚ್ಚು ಇದೆ. ಇದರಿಂದ ಗೋಧಿ, ರಾಗಿಗಳಿಗಿಂತ ಬೇಗ ಜೀರ್ಣವಾಗುತ್ತದೆ.

ಆದ್ದರಿಂದ ಮುದುಕರು, ರೋಗಿಗಳು,ಮಕ್ಕಳಿಗೆ ಅಕ್ಕಿ ಉತ್ತಮ ಆಹಾರ. ಇದರಲ್ಲಿರುವ ಸಸಾರಜನಕದ ಭಾಗ 7.5% ಮಾತ್ರ. ಆದರೆ ಇದರಲ್ಲಿಯ ಎಂಟು ಅವಶ್ಯ ಅಮೈನೋ ಆಮ್ಲಗಳಿವೆ. ಇವು ಒಳ್ಳೆಯ ಚರ್ಮ, ಕಣ್ಣಿನ ಹೊಳಪು ಉಂಟುಮಾಡುವುದಲ್ಲದೆ, ಹೃದಯ, ಶ್ವಾಸಕೋಶ, ಮಸ್ತಿಷ್ಕ ಮುಂತಾದುವುಗಳ ಜೀವಕೋಶಗಳನ್ನು ಬೆಳಸುತ್ತವೆ.

ಇದರಲ್ಲಿರುವ 'ಬಿ' ಕಾಂಪ್ಲೆಕ್ಸ್, ಥಯಾಮಿನ್, ರಿಬೋಫ್ಲೇವಿನ್ ಮತ್ತು ನಯಾಸಿನ್ ಗಳಿಂದ ಕೂಡಿದೆ. ಇದರಿಂದ ಚರ್ಮದ ಆರೋಗ್ಯ, ನರಗಳು, ಹಾರ್ಮೋನ್, ಇವುಗಳ ಬೆಳವಣಿಗೆಗೆ ಸಹಾಯಕ. ಶರೀರದ ಒಳಗಿನ ನೀರಿನ ಸಮತ್ವವನ್ನು ಕಾಯುತ್ತದೆ. ಕಬ್ಬಿಣವನ್ನು ರಕ್ತಕ್ಕೆ ಕೊಡುವುದರಿಂದ 'ಅನೀಮಿಯ' ಗುಣವಾಗುತ್ತದೆ.

ಆಯುರ್ವೇದ ಅಕ್ಕಿಯ ಬಗ್ಗೆ ಹೀಗೆ ಹೇಳುತ್ತದೆ. 'ರಕ್ತಶ್ಹಲಿರ್ವರಸ್ತೇಷಾಂ ಬಲ್ಯೋವ್ರಣ ತ್ರಿದೋಷಜಿತ್! ಚಕ್ಷುಷ್ಯೋ ಮೂತ್ರಲಃ ಸ್ವರ್ಯಃ ಶುಕ್ರಲಃ ತೃಟ್ ಜ್ವರಾಪಹಃ'-ಕೆಂಪು ಅಕ್ಕಿ ಬೇರೆ ಎಲ್ಲಾ ಅಕ್ಕಿಗಳಿಗಿಂತ ಶ್ರೇಷ್ಠವಾದದ್ದು.

ಅದು ಬಲಕಾರಿ,ಗಾಯಗಳನ್ನು ವಾಸಿಮಾಡುವುದು. ಮೂತ್ರ ದೋಷಗಳನ್ನೂ ತೆಗೆಯುವುದು, ಕಣ್ಣಿಗೆ ಹಿತಕರ, ಮೂತ್ರವನ್ನು ಸಡಿಲಿಸುವುದು, ಧ್ವನಿಯ ಆರೋಗ್ಯಕ್ಕೆ ಒಳ್ಳೆಯದು, ವೀರ್ಯವರ್ಧಕ, ಅತಿಯಾದ ಬಾಯಾರಿಕೆ, ಜ್ವರವನ್ನು ಕಳೆಯುವುದು. ಈ ಗುಣಗಳಿಂದ ಎಲ್ಲೆಲ್ಲಿ ಅದನ್ನು ಉಪಯೋಗಿಸಬೇಕೆಂದು ಅರಿವಾಗುತ್ತದೆ.

ಕಫದ ಕಾಯಿಲೆಗಳಲ್ಲಿ ಇದು ವರ್ಜ್ಯ. ಮಧುರ ರಸವು ಕಫವನ್ನು ಹೆಚ್ಚಿಸುವುದು. ನೆಗಡಿ, ಕೆಮ್ಮು, ಆಸ್ತಮಾಗಳಲ್ಲಿ ಹೆಚ್ಚು ಬಳಸಬಾರದು. ಅಕ್ಕಿಯಲ್ಲಿ ಕೊಬ್ಬು ಕಡಿಮೆ. ಕೆಂಪಕ್ಕಿಯಲ್ಲಿರುವ ಕ್ಯಾಲ್ಸಿಯಂ ಲವಣವು ನರಗಳ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವುದು. ಆದ್ದರಿಂದ ರಕ್ತದೊತ್ತಡದ ರೋಗಿಗಳಿಗೆ ಉತ್ತಮ ಆಹಾರ.

ಜೀರ್ಣಾಂಗಗಳಲ್ಲಿನ ಎಲ್ಲಾ ತೊಂದರೆಗಳಲ್ಲಿ ಅನ್ನವು ಬಹಳ ಉಪಕಾರಿ. ಇದರಲ್ಲಿ ನಾರಿನ ಅಂಶ ಕಡಿಮೆ ಇರುವುದರಿಂದ ಹೊಟ್ಟೆಗೆ ಹಿತಕರ. ಎಲ್ಲಾ ಜೀರ್ಣಾಂಗಗಳ ತೊಂದರೆಯಲ್ಲಿಯೂ ಇದನ್ನು ಉಪಯೋಗಿಸಬಹುದು. ಭೇದಿಯಲ್ಲಿಯೂ ಕೂಡ ಅನ್ನವನ್ನು ಗಂಜಿಯ ರೂಪದಲ್ಲಿ ಕೊಡಬಹುದು.

ಮೇಲೆ ಹೇಳಿದ ಎಲ್ಲಾ ಕಾರಣಗಳಿಂದ ಅನ್ನವು ಶರೀರಕ್ಕೆ ಅನುಕೂಲಕರವೆಂಬುದು ವ್ಯಕ್ತವಾಗುವುದು, ಆದರೆ ಕೆಂಪಕ್ಕಿಯನ್ನು ಉಪಯೋಗಿಸಬೇಕು. ಈ ಅನ್ನವನ್ನೂ ಸಹ ಹೆಚ್ಚು ತರಕಾರಿಗಳ ಜೊತೆ, ಮೊಳಕೆಯ ಕಾಳುಗಳೊಂದಿಗೆ ಸೇವಿಸಬೇಕು. ಜತೆಗೆ ಹಣ್ಣು, ಹಾಲು, ಮೊಸರು ಇತ್ಯಾದಿಗಳಿರಬೇಕು.

ಯಾವಾಗಲೂ ಅನ್ನ-ಸಾರು, ಬರೀ ಮೊಸರನ್ನ ಇಷ್ಟನ್ನೇ ಸೇವಿಸುತ್ತಿರಬಾರದು. ಸಮತ್ವದಿಂದ ಕೂಡಿದ್ದಲ್ಲಿ ತೊಂದರೆಯಿರುವುದಿಲ್ಲ. ನಾವು ಮಸಾಲೆಯೊಂದಿಗೆ ಬರೀ ಅನ್ನವನ್ನು ತಿನ್ನುವ ರೂಢಿ ಮಾಡಿಕೊಂಡಿದ್ದೇವೆ. ಇದು ತಪ್ಪು. ಹಿಂದಿನವರ ಆಹಾರದಲ್ಲಿಯೂ ಸಹ ಎಲ್ಲೂ ಬರೀ ಅನ್ನವಿರಲಿಲ್ಲ. ವೈವಿಧ್ಯಮಯವಾದ ಸೊಪ್ಪು-ತರಕಾರಿಗಳು, ಹಣ್ಣುಗಳು, ಹಾಲು ಇತ್ಯಾದಿಗಳಿದ್ದವು.

ಖರ್ಜೂರದ ಪ್ರಮುಖ 8 ಆರೋಗ್ಯಕರ ಗುಣಗಳು

ಖರ್ಜೂರದ ಪ್ರಮುಖ 8 ಆರೋಗ್ಯಕರ ಗುಣಗಳು

ದಿನವೂ ಖರ್ಜೂರ ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ಗುಣಗಳಿವೆ. ತಿನ್ನಲು ಸಿಹಿಯಾಗಿರುವ ಈ ಹಣ್ಣು ಆರೋಗ್ಯದ ಸಿಹಿ ಹೆಚ್ಚಿಸುವಲ್ಲಿ ಎಷ್ಟು ಪರಿಣಾಮಕಾರಿ ಎಂದು ತಿಳಿಯಲು ಮುಂದೆ ಓದಿ.

1. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಸುಲಭವಾಗಿ ಜೀರ್ಣವಾಗುತ್ತದೆ. ದೇಹಕ್ಕೆ ಬೇಗನೆ ಶಕ್ತಿಯನ್ನು ತುಂಬುವುದು.

2. ದಿನವೂ ಖರ್ಜೂರ ತಿಂದರೆ ಹೊಟ್ಟೆಯಲ್ಲಿ ಆರೋಗ್ಯಕರವಾದ ಬ್ಯಾಕ್ಟೀರಿಯವನ್ನು ಹೆಚ್ಚು ಉತ್ಪತ್ತಿ ಮಾಡುವುದರಿಂದ ಕರಳಿನ ಕಾರ್ಯಕ್ಕೆ ಸಹಾಯಮಾಡುತ್ತದೆ.

3. ಖರ್ಜೂರ ತಿನ್ನುವುದರಿಂದ ಕ್ಯಾನ್ಸರ್ ರಕ್ತ ಕಣಗಳು ಹರಡುವುದನ್ನು ತಡೆಗಟ್ಟಬಹುದು.

4. ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿಯುವುದು ಹೃದಯ ಸಮಸ್ಯೆ ಇರುವವರಿಗೆ ಒಳ್ಳೆಯದು.

5. ಖರ್ಜೂರದಲ್ಲಿ ಕಬ್ಬಿಣದಂಶ ಇರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.

6. ಅಸಿಡಿಟಿ ಮತ್ತು ಹೃದಯದ ಉರಿ ಕಡಿಮೆಯಾಗಲು ಖರ್ಜೂರ ಸಹಾಯಮಾಡುತ್ತದೆ.

7. ಹೆರಿಗೆಯ ನಂತರ ಎದೆಯಲ್ಲಿ ಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ.

8. ಖರ್ಜೂರ ಹಾಕಿ ಕಾಯಿಸಿದ ಹಾಲು ಮಕ್ಕಳಿಗೆ ಅತ್ಯುತ್ತಮವಾದ ಪೋಷಕಾಂಶವಾಗಿದೆ.

ತುಳಸಿ ಎಂಬ ಪ್ರಾಚೀನ ಆಂಟಿ ವೈರಸ್

                   ತುಳಸಿ ಎಂಬ ಪ್ರಾಚೀನ ಆಂಟಿ ವೈರಸ್

ತುಳಸಿ ಅಥವಾ ತುಲಸಿ ಎಂಬ ಪದಕ್ಕೆ ಅಪ್ರತಿಮ, ಅದ್ವೀತಿಯ ಎಂಬ ಅರ್ಥ ಉಂಟು. ದೇವಾಲಯಗಳಲ್ಲಿ, ಯಾತ್ರಾಸ್ಥಳಗಳಲ್ಲಿ ಹೆಚ್ಚಾಗಿ ಕಾಣ ಸಿಗುವ ತುಳಸಿ, ಸಂಪ್ರದಾಯಸ್ಥ ಹಿಂದೂ ಕುಟುಂಬದ ಖಾಯಂ ಸದಸ್ಯೆ.


ಪವಿತ್ರ ತುಳಸಿ ಕಟ್ಟೆಗೆ ನಿತ್ಯ ಪೂಜೆ ನಡೆಯುವುದು ಮಾಮೂಲಿಯಾದರೂ ದೀಪಾವಳಿ ವೇಳೆಗೆ ತುಳಸಿಗೆ ಮದುಮಗಳ ಸಿಂಗಾರ ಸಿಗುತ್ತದೆ. ಅದು ಹಾಗಿರಲಿ, ತುಳಸಿ ನಮ್ಮ ಆರೋಗ್ಯಕ್ಕೆ ಹೇಗೆ ನೆರವಾಗುತ್ತಾಳೆ ನೋಡೋಣ.


ತುಳಸಿಗೆ ಒತ್ತಡ ನಿವಾರಕ ಗುಣವಿದೆ. ಹಿಂದೆಲ್ಲಾ ದೂರದ ಊರಿನಿಂದ ಬರುವ ಯಾತ್ರಿಕರು ತುಳಸಿ ಎಲೆಯನ್ನು ಜಗಿದು ಪ್ರಯಾಣದ ಆಯಾಸವನ್ನು ನೀಗಿಸಿಕೊಂಡು ಸಾಗುತ್ತಿದ್ದರಂತೆ.


ಪ್ರಮುಖವಾಗಿ ಎರಡು ವಿಧಗಳಲ್ಲಿ ಸಿಗುತ್ತದೆ. ಒಂದು ಕೃಷ್ಣ ತುಳಸಿ(ಕಪ್ಪಗಿನದು) ಇನ್ನೊಂದು ಶ್ರೀ ತುಳಸಿ(ಬಿಳಿಯ ವರ್ಣದ್ದು). ಒತ್ತಡ ನಿವಾರಣೆ ಜತೆಗೆ ಇದು ಅತ್ಯುತ್ತಮ ವೈರಾಣು ರಕ್ಷಕ(anti -virus). ತುಳಸಿಯ anti -virus ಗುಣದ ಬಲದಿಂದ ವಿಷಮ ಶೀತ ಜ್ವರ(viral fever), ಮಲೇರಿಯಾದಂತಹ ಕಾಯಿಲೆಯನ್ನು ಹೋಗಲಾಡಿಸಬಹುದು.


ತುಳಸಿಯ ಸಾಮಾನ್ಯ ಉಪಯೋಗಗಳು:


* ಜ್ವರಕ್ಕೆ: ಚೆನ್ನಾಗಿ ಅರೆದ ತುಳಸಿಯನ್ನು ಬಟ್ಟೆಯಲ್ಲಿ ಸೋಸಬೇಕು. ತುಳಸಿ ರಸವನ್ನು 1-2 ಟೀ ಚಮಚ(ಮಕ್ಕಳಿಗೆ) ಅಥವಾ 2-4 ಟೀ ಚಮಚ(ದೊಡ್ಡವರಿಗೆ) ಜೇನಿನೊಂದಿಗೆ ದಿನಕ್ಕೆ 2 ರಿಂದ 3 ಬಾರಿನೀಡಬಹುದು.


* ತುಳಸಿ ರಸವನ್ನು ಶ್ವಾಸಕೋಶಗಳ ಸೋಂಕು, ಕೆಮ್ಮು, ನೆಗಡಿ ಹೋಗಲಾಡಿಸಲು ಸೇವಿಸಬಹುದು.


* ಜೇಡ ಕಚ್ಚಿದರೆ ತುಳಸಿ ರಸಕ್ಕೆ ಅರಿಶಿನವನ್ನು ಬೆರೆಸಿ ಜೇಡ ಕಚ್ಚಿದ ಸ್ಥಳದ ಮೇಲೆ ಹಚ್ಚಬೇಕು. ಹಾಗೂ ಸೇವಿಸಬೇಕು.


* ಕೆಂಡದಲ್ಲಿ ಬಾಡಿಸಿದ ತುಳಸಿಯನ್ನು ಬಟ್ಟೆಯಲ್ಲಿ ಕಟ್ಟಿ ನಾಸಿಕದ ಬಳಿ ಹಿಡಿದುಕೊಂಡು ಉಸಿರನ್ನು ಒಳಗೆ ಎಳೆದುಕೊಂಡರೆ, ಕಟ್ಟಿದ ನಾಸಿಕ ಸಡಿಲವಾಗಿ ಶೀತ ಮಾಯವಾಗುತ್ತದೆ.


* ತುಳಸಿರಸ ಹಾಗೂ ಜೇನುತುಪ್ಪವನ್ನು ತಲಾ 3 ಮಿ.ಗ್ರಾಂನಷ್ಟು ಕಲೆಸಿ ಸೇವಿಸಿದರೆ ಜೀರ್ಣಶಕ್ತಿ ಹೆಚ್ಚುತ್ತದೆ.


* ತುಳಸಿ, ಮೆಣಸು, ಒಣಶುಂಠಿ ಮತ್ತು ಇದ್ದಿಲನ್ನು ಪುಡಿಮಾಡಿ ಕಷಾಯಮಾಡಿ ಕುಡಿದರೆ ನೆಗಡಿ ಗುಣವಾಗುತ್ತದೆ.


* ಮನೆಯಂಗಳದಲ್ಲಿ ತುಳಸಿ ಬೆಳೆಸುವುದರಿಂದ ವಾತಾವರಣ ಸೂಕ್ಷ್ಮಾಣು ಜೀವಿಗಳ ತೊಂದರೆಯಿಂದ ಮುಕ್ತವಾಗುತ್ತದೆ. ಮಾನವನ ದೇಹಕ್ಕೆ ಅಗತ್ಯವಾದ ಆಮ್ಲಜನಕ ಯಥೇಚ್ಛವಾಗಿ ಸಿಗುತ್ತದೆ.


* ತುಳಸಿ ಕಷಾಯವನ್ನು ಮಾಡಿ ಹಾಲು ಮತ್ತು ಸಕ್ಕರೆಯನ್ನು ಬೆರೆಸಿ ಕುಡಿಯುತ್ತ ಬಂದರೆ ದೇಹ ಸದೃಢವಾಗುತ್ತದೆ.ದೇಹದ ಕಾಂತಿ ಹೆಚ್ಚುತ್ತದೆ.


* ಕುಡಿಯುವ ನೀರಿನ ಪಾತ್ರೆಗೆ ನಾಲ್ಕಾರು ತುಳಸಿ ದಳಗಳನು ಹಾಕುವುದರಿಂದ ನೀರಿನ ಶುದ್ಧತೆ ಹೆಚ್ಚಿ, ಸೇವಿಸಲು ಉತ್ತಮವಾಗುತ್ತದೆ.


* ತುಳಸಿ ಎಲೆಯ ರಸವನ್ನು ಕಾಲುಭಾಗ ಎಣ್ಣೆಯಲ್ಲಿ ಕಾಯಿಸಿ ತಲೆಗೆ ಹಚ್ಚಲು ತಲೆಯಲ್ಲಿ ಹೇನು, ಹೊಟ್ಟು ಬರುವಿಕೆ ನಿವಾರಣೆಯಾಗುತ್ತದೆ.


* ಚರ್ಮದ ಸೋಂಕು ನಿವಾರಣೆಗೂ ತುಳಸಿ ದಳ ಪ್ರಯೋಜನಕಾರಿ. ಸ್ನಾನದ ನೀರಿಗೆ ಕೆಲವು ತುಳಸಿ ದಳಗಳನ್ನು ಹಾಕಿ ಕೆಲ ನಿಮಿಷಗಳ ಕಾಲ ಬಿಟ್ಟು ನಂತರ ಸ್ನಾನ ಮಾಡಿದರೆ, ಚರ್ಮ ಮೃದುವಾಗುವುದಲ್ಲದೆ, ರೋಗಮುಕ್ತವಾಗುತ್ತದೆ.


* ಚರ್ಮದ ತುರಿಕೆ, ಇಸುಬು, ಫಂಗಸ್ ಗಳ ಉಪಶಮನಕ್ಕೆ ತುಳಸಿ ಬಳಕೆ ಸಾಮಾನ್ಯ.


* ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸುವುದರಿಂದ ದೀರ್ಘಾಯುಸ್ಯ ಹೊಂದ ಬಯಸುವವರು ತುಳಸಿ ಜಗಿಯಬಹುದು.


ಪವಿತ್ರ ತುಳಸಿ ವೈದ್ಯ ತುಳಸಿ ಎಲ್ಲರಿಗೂ ತಿಳಿಸಿ


ಪವಿತ್ರ ತುಳಸಿ ಮತ್ತು ಚಿಕಿತ್ಸಕ ಗುಣಗಳ ಗಣಿ ತುಳಸಿ. ಹಲವುದಳ ಶ್ರೀತುಳಸಿ ಸೇವನೆ ಹಂದಿಜ್ವರ ನಿವಾರಣೆಗೆ ರಾಮಬಾಣ ಎನ್ನುತ್ತದೆ ಆಯುರ್ವೇದ. ಎಚ್1ಎನ್1 ರೋಗಾಣುಗಳು ತಾಗದಂತೆ ತುಳಸಿ ನಮ್ಮನ್ನು ರಕ್ಷಿಸುವುದಷ್ಟೆ ಅಲ್ಲ, ರೋಗವನ್ನು ಶೀಘ್ರವಾಗಿ ಹೋಗಲಾಡಿಸಿ ಗುಣ ಮುಖಮಾಡುತ್ತದೆ ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ.


ಫ್ಲು ಬಾಧೆಯನ್ನು ಹತ್ತಿಕ್ಕುವ ಗುಣ ತುಳಸಿಯಲ್ಲಿದೆ ಎಂದು ವೈದ್ಯಕೀಯ ತಜ್ಞರು ಇತ್ತೀಚೆಗೆ ಕಂಡುಕೊಂಡಿದ್ದಾರೆ. ಪ್ರಪಂಚದ ನಾನಾ ಕಡೆ ಆಯುರ್ವೇದ ಅಭ್ಯಾಸ ಮಾಡುವ ವೈದ್ಯರು ಇದೇ ಅಭಿಪ್ರಾಯ ತಳೆದಿದ್ದಾರೆ. ತುಳಸಿ ದೇಹದಲ್ಲಿನ ರೋಗನಿರೋಧಕ ಗುಣವನ್ನು ವೃದ್ಧಿಸುವುದಲ್ಲದೆ ಮೈಮೇಲೆ ಎರಗುವ ವೈರಾಣುಗಳ ವಿರುದ್ಧ ಯಶಸ್ವಿ ಸಮರ ಸಾರುವ ಶಕ್ತಿ ಹೊಂದಿರುತ್ತದೆ. ಜಪಾನಿನಲ್ಲಿ ಹಬ್ಬಿದ್ದ ಎನ್ ಸಿಫಾಲಿಟಿಸ್ ರೋಗವನ್ನು ತಡೆಯಲು ತುಳಸಿಯನ್ನು ಬಳಸಲಾಗಿತ್ತು. ತುಳಸಿಯ ಈ ಚಿಕಿತ್ಸಕ ಗುಣವನ್ನು ಹಂದಿಜ್ವರ ನಿವಾರಣೆಗೂ ಬಳಸಬಹುದು ಎಂದು ಗಿಡಮೂಲಿಕೆಗಳ ಖ್ಯಾತ ವೈದ್ಯ ಡಾ. ಯು.ಕೆ. ತಿವಾರಿ ಹೇಳುತ್ತಾರೆ.


ತುಳಸಿ ಎಲೆಗಳು ಹಂದಿಜ್ವರ ವೈರಾಣು ರೋಗ ಬಾರದಂತೆ ರಕ್ಷಿಸಬಲ್ಲದು ಮತ್ತು ರೋಗಪೀಡೀತರು ಶೀಘ್ರ ಗುಣಮುಖರಾಗುವಂತೆ ನೆರವಾಗಬಲ್ಲುದು ಎಂದು ತಿವಾರಿ ಹೇಳಿದ್ದಾರೆ. ಹಂದಿಜ್ವರ ತಡೆಯುವುದರಲ್ಲಿ ತುಳಸಿಯ ಪಾತ್ರ ಹಿರಿಯದಾದದ್ದು ಎಂದು ಹೇಳುತ್ತಾರೆ ಇನ್ನೊಬ್ಬ ವೈದ್ಯ ಡಾ. ಭೂಪೇಶ್ ಪಟೇಲ್. ಜಾಮ್ ನಗರದಲ್ಲಿರುವ ಗುಜರಾತ್ ಆಯುರ್ವೇದ ವಿಶ್ವವಿದ್ಯಾಲದಲ್ಲಿ ಭೂಪೇಶ್ ಅವರು ಉಪನ್ಯಾಸಕಾರಿದ್ದಾರೆ.


ತುಳಸಿಗೆ ಸ್ವೈನ್ ಫ್ಲು ಹಿಮ್ಮೆಟ್ಟಿಸುವ ಶಕ್ತಿ ಇದೆ. ಆದ್ದರಿಂದ ನೀವು ಪ್ರತಿದಿನ 20ರಿಂದ 25ರಷ್ಟು ತಾಜಾ ತುಳಸಿ ಎಲೆಗಳನ್ನು ಖಾಲಿಹೊಟ್ಟೆ ಇದ್ದಾಗ ಸೇವಿಸಬೇಕು. ರೋಗ ನಿರೋಧಕ ಶಕ್ತಿಯನ್ನು ತುಳಸಿ ವೃದ್ಧಿಸುತ್ತದೆ ಹಾಗೂ ಹಂದಿಜ್ವರ ಹತ್ತಿರ ಸುಳಿಯದಂತೆ ಕಾಪಾಡುತ್ತದೆ ಎಂದು ಭೂಪೇಶ್ ಅಭಿಪ್ರಾಯಪಟ್ಟಿದ್ದಾರೆ. ಲಕ್ನೋದಲ್ಲಿರುವ ಕಿಂಗ್ ಜಾರ್ಜ್ ಮೆಡಿಕಲ್ ಕಾಲೇಜಿನಲ್ಲಿ ವೃತ್ತಿಪರರಾಗಿ ಕೆಲಸಮಾಡಿದ್ದ ಡಾ. ನರೇಂದ್ರ ಸಿಂಗ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಂದಿಜ್ವರಕ್ಕೆ ತುತ್ತಾಗಿರುವ ರೋಗಿಗಳು ತುಳಸಿಯನ್ನು ಯಾವರೀತಿ ಬಳಸಬೇಕು? ರೋಗದ ತೀವ್ರತೆ ಮತ್ತು ರೋಗಿಯ ಸ್ಥಿತಿ ತುಳಸಿ ಸೇವನೆಯ ಪ್ರಮಾಣವನ್ನು ನಿರ್ಧರಿಸುತ್ತದೆ ಎನ್ನುತ್ತಾರೆ ವೈದ್ಯರು.


ತುಳಸಿಯಲ್ಲಿ ಮೂರು ವಿಧ : ಕೃಷ್ಣ ತುಳಸಿ(Ocimum sanctum), ವನ ತುಳಸಿ(Ocimum gratissimum), ಕಟುಕಿ ತುಳಸಿ(Picrorriza kurroa). ಈ ಮೂರೂ ಬಗೆಯ ತುಳಸಿಯಲ್ಲಿ ರೋಗ ನಿರೋಧಕ ಶಕ್ತಿ ಉಂಟು. ರೋಗವನ್ನು ಹಿಮ್ಮೆಟ್ಟಿಸುವ ಶಕ್ತಿಯೂ ಉಂಟು. ತುಳಸಿ ಸೇವನೆಯಿಂದ ಯಾವುದೇ ಬಗೆಯ ಅಡ್ಡ ಪರಿಣಾಮಗಳು ಇರುವುದಿಲ್ಲ. ಇತರ ಔಷಧಗಳನ್ನು ಸೇವಿಸುವಂಥ ಸಮಯದಲ್ಲೂ ತುಳಸಿಯನ್ನು ಧಾರಾಳವಾಗಿ ತಿನ್ನಬಹುದು ಎಂದು ಮೇಲೆ ಪ್ರಸ್ತಾಪಿಸಿದ ಪ್ರತಿಯೊಬ್ಬ ವೈದ್ಯರೂ ಹೇಳಿದ್ದಾರೆ.

Friday, November 18, 2011

ಬಾಯಿಯ ದುರ್ಗಂಧ ಹೋಗಲಾಡಿಸುವ ಆಹಾರಗಳು

ಬಾಯಿಯ ಕೆಟ್ಟ ವಾಸನೆ ಮನುಷ್ಯನ ಆತ್ಮವಿಶ್ವಾಸವನ್ನೇ ಕುಂದಿಸುತ್ತೆ. ಹಲ್ಲಿನ ಸ್ವಾಸ್ಥ್ಯದೆಡೆಗಿನ ನಿರ್ಲಕ್ಷ್ಯ ಮತ್ತು ಜೀರ್ಣಕ್ರಿಯೆ ಸಮಸ್ಯೆ ಬಾಯಿಯ ದುರ್ವಾಸನೆ ತರುತ್ತದೆ. ಕೇವಲ ಹಲ್ಲುಜ್ಜುವ ಮೂಲಕ ಬಾಯಿಯನ್ನು ಶುದ್ಧವಾಗಿಟ್ಟುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ನೈಸರ್ಗಿಕವಾಗಿ ಬಾಯಿಯ ದುರ್ನಾತ ಹೋಗಿಸುವ ಕೆಲವು ಆಹಾರಗಳು ಇಲ್ಲಿವೆ.
ಬಾಯಿಯ ದುರ್ಗಂಧ ಹೋಗಲಾಡಿಸುವ ಆಹಾರಗಳು:

* ವಿಟಮಿನ್ ಸಿ:
ಸಿಟ್ರಸ್ ಹಣ್ಣುಗಳ ಸೇವನೆ ಬಾಯಿಯ ಆರೋಗ್ಯವನ್ನು ಕಾಪಾಡುತ್ತದೆ. ಈ ಹಣ್ಣುಗಳು ಬಾಯಿ ಮತ್ತು ಹಲ್ಲಿನಲ್ಲಿನ ಬ್ಯಾಕ್ಟೀರಿಯಾ ಕಡಿಮೆಮಾಡುತ್ತದೆ. ಇದರಿಂದ ವಸಡುಗಳಲ್ಲಿನ ಸಮಸ್ಯೆಯನ್ನೂ ತಡೆಯಬಹುದು. ಸ್ಟ್ರಾಬೆರಿ, ದ್ರಾಕ್ಷಿ, ನಿಂಬೆ, ಕಿತ್ತಳೆ ಈ ಹಣ್ಣುಗಳು ಮತ್ತು ಸೇಬು, ಕ್ಯಾರೆಟ್ ಇವುಗಳನ್ನೂ ಅಗಿದು ತಿಂದರೆ ಹಲ್ಲುಗಳು ಶುದ್ಧಗೊಳ್ಳುವುದಲ್ಲದೆ ದುರ್ವಾಸನೆಯೂ ಹೋಗುತ್ತದೆ.



* ನಿಂಬೆಹಣ್ಣು: ಊಟವಾದ ನಂತರ ನಿಂಬೆಹುಳಿ ಅಥವಾ ನಿಂಬೆಸಿಪ್ಪೆಯನ್ನು ಒಮ್ಮೆ ಉಜ್ಜಿಕೊಂಡರೆ ಹಲ್ಲುಗಳೂ ಚೆನ್ನಾಗಿರುತ್ತೆ, ದುರ್ವಾಸನೆಯೂ ಇರುವುದಿಲ್ಲ. ನಿಂಬೆ ಬಾಯಿಯಲ್ಲಿನ ಬ್ಯಾಕ್ಟೀರಿಯಾ ತೊಲಗಿಸುವುದಲ್ಲದೆ ಈರುಳ್ಳಿ, ಶುಂಠಿ ಬೆಳ್ಳುಳ್ಳಿಯ ವಾಸನೆಯನ್ನೂ ಬಾಯಿಯಿಂದ ಹೋಗಿಸುತ್ತದೆ.


* ಏಲಕ್ಕಿ, ಸೋಂಪು: ಏಲಕ್ಕಿ, ಲವಂಗ ಮತ್ತು ಸೋಂಪು ಕಾಳು ನೈಸರ್ಗಿಕವಾಗಿ ಬಾಯಿಯಿಂದ ದುರ್ಗಂಧವನ್ನು ಹೋಗಿಸುತ್ತದೆ. ಇದು ಬಾಯಿಯನ್ನು ರಿಫ್ರೆಷ್ ಮಾಡುತ್ತದೆ.


* ಸೀಬೆ ಎಲೆ: ಸೀಬೆ ಗಿಡದ ಎಲೆಯನ್ನು ಅಗಿದರೆ ಹಲ್ಲುಗಳು ಬೆಳ್ಳಗಾಗುತ್ತವೆ ಎನ್ನಲಾಗಿದೆ. ಇದು ಬಾಯಿ ದುರ್ಗಂಧವನ್ನೂ ತಡೆಯುತ್ತದೆ. ಕೊತ್ತಂಬರಿ ಮತ್ತು ಪುದೀನಾ ಎಲೆಯನ್ನೂ ಅಗಿಯಬಹುದು.


* ಮೊಸರು: ಸಂಶೋಧಕರ ಪ್ರಕಾರ, ಮೊಸರಿನ ಸೇವನೆಯಿಂದ ಬಾಯಿಯಲ್ಲಿ ದುರ್ವಾಸನೆಗೆ ಕಾರಣವಾಗುವ ಸಲ್ಫೈಟ್ ಕಡಿಮೆ ಮಾಡಬಹುದು. ಇದು ಬ್ಯಾಕ್ಟೀರಿಯಾವನ್ನು ತೊಲಗಿಸುವುದರಿಂದ ಕಡಿಮೆ ಕೊಬ್ಬಿನಂಶ, ಸಕ್ಕರೆರಹಿತ ಮೊಸರಿಸ ಸೇವನೆ ತುಂಬಾ ಒಳ್ಳೆಯದು. ಆದರೆ ಸಕ್ಕರೆ ಬೆರೆಸಿ ತಿಂದರೆ ಬಾಯಿಯಲ್ಲಿ ಬ್ಯಾಕ್ಟೀರಿಯಾ ಬೆಳವಣಿಗೆ ಇನ್ನಷ್ಟು ಹೆಚ್ಚುತ್ತದೆ.